ಜೆ ಎನ್ ಎನ್ ಕಾಲೇಜಿನಲ್ಲಿ ‘ಉತ್ಥಾನ’ ಸಂಭ್ರಮ, ನಟ ಪೃಥ್ವಿ ಅಂಬರ್ ನೃತ್ಯ

ಜೆ ಎನ್ ಎನ್ ಕಾಲೇಜಿನಲ್ಲಿ ‘ಉತ್ಥಾನ’ ಸಂಭ್ರಮ, ನಟ ಪೃಥ್ವಿ ಅಂಬರ್ ನೃತ್ಯ

ಶಿವಮೊಗ್ಗ | 19 ಮೇ 2023 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳು ಜೀವನದಲ್ಲಿ ವೈಯುಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಉನ್ನತಿಗಾಗಿ ಬೆಳಗುವ ಬೆಳಕು ನೀವಾಗಬೇಕು ಎಂದು ಚಲನ ಚಿತ್ರ ‌ನಟ ಪೃಥ್ವಿ ಅಂಬರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶುಕ್ರವಾರ ನಗರದ ಜೆ ಎನ್ ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ ‘ಉತ್ಥಾನ-2023’ ಉದ್ಘಾಟಿಸಿ ಮಾತನಾಡಿದರು.

ನಾವು ಎಷ್ಟೇ ಅಭಿವೃದ್ಧಿ ಹೊಂದಿದ್ದರೂ ನಮ್ಮ ನಡುವೆ ಇರುವ ಕುಟುಂಬ, ಸಮಾಜದೊಂದಿಗೆ ಪ್ರೀತಿಯಿಂದ ವರ್ತಿಸಬೇಕು. ಪ್ರೀತಿ ತುಂಬಿದ ಸಮಾಜ ಇಲ್ಲದೇ ಹೋದಾಗ ಬದುಕು ವ್ಯರ್ಥವಾದಂತೆ ಭಾಸವಾಗುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಮಾತನಾಡಿ, ಸಮಾಜವನ್ನು ನಿಮ್ಮೊಂದಿಗೆ ತೆಗೆದುಕೊಂಡು ಸಾಗಬೇಕು. ಜೀವನ ಪ್ರತಿ ಹಂತದ ನಿರ್ವಹಣೆಯು ಸೃಜನಶೀಲ ಆತ್ಮವಿಶ್ವಾಸದೊಂದಿಗೆ ಉತ್ಥಾನದಿಂದ ಕೂಡಿರಬೇಕು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಕಾಲೇಜಿನ ಶೈಕ್ಷಣಿಕ ಡೀನ್ ಡಾ. ಪಿ.ಮಂಜುನಾಥ, ಎಂಬಿಎ ವಿಭಾಗದ ನಿರ್ದೇಶಕ ಡಾ. ಶ್ರೀಕಾಂತ್ ಉಪಸ್ಥಿತರಿದ್ದರು.

ನಟ ಪೃಥ್ವಿ ಅಂಬರ್‌ ಡ್ಯಾನ್ಸ್‌ ವಿದ್ಯಾರ್ಥಿಗಳಿಗೆ ಇಷ್ಟವಾಯಿತು. https://fb.watch/kD8OUQvuJo/?mibextid=Nif5oz ಸಿನಿಮಾ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕೋತ್ಸವ, ಗಾನೋತ್ಸವ, ಚಿತ್ರೋತ್ಸವ,  ಪ್ರಶ್ನೋತ್ಸವ, ಮಂಥನೋತ್ಸವ, ನೃತ್ಯೋತ್ಸವ, ಪಂಥೋತ್ಸವ, ವಸ್ತ್ರೋತ್ಸವ, ನಾವೀನ್ಯೋತ್ಸವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಜಿಲ್ಲೆಯ 26 ಕಾಲೇಜುಗಳ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!