ವ್ಯಾಪಾರ ವಹಿವಾಟು ನಡೆಸುವವರಿಗೆ ಅನುಕೂಲ, ಜುಲೈ 19ರ ಬುಧವಾರವೂ ನಡೆಯಲಿದೆ ಟ್ರೇಡ್‌ ಲೈಸೆನ್ಸ್‌ ಮೇಳ

ವ್ಯಾಪಾರ ವಹಿವಾಟು ನಡೆಸುವವರಿಗೆ ಅನುಕೂಲ, ಜುಲೈ 19ರ ಬುಧವಾರವೂ ನಡೆಯಲಿದೆ ಟ್ರೇಡ್‌ ಲೈಸೆನ್ಸ್‌ ಮೇಳ

ಶಿವಮೊಗ್ಗ | 18 ಜುಲೈ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಉದ್ಯಮಿಗಳಿಗೆ ಅನುಕೂಲ ಕಲ್ಪಿಸುವುದು ಹಾಗೂ ವ್ಯಾಪಾರದ ಲೈಸೆನ್ಸ್ ಪ್ರಕ್ರಿಯೆ ಸುಲಭಗೊಳಿಸುವ ಆಶಯದಿಂದ ಮೇಳ ಆಯೋಜಿಸಿದ್ದು, ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸಹಯೋಗದಲ್ಲಿ ಮೂರನೇ ಬಾರಿ ಆಯೋಜಿಸಿದ್ದ “ಟ್ರೇಡ್ ಲೈಸೆನ್ಸ್ ಮೇಳ” ಉದ್ಘಾಟಿಸಿ ಮಾತನಾಡಿ, ಲೈಸೆನ್ಸ್ ಪಡೆಯಲು ಉದ್ಯಮಿಗಳಿಗೆ ಆಗುವ ತೊಂದರೆಗಳನ್ನು ಪರಿಹರಿಸುವ ಆಶಯದಿಂದ ಮೇಳ ನಡೆಸುತ್ತಿದ್ದು, ದಾಖಲೆಗಳ ಜತೆಯಲ್ಲಿ ಅರ್ಜಿ ಸಲ್ಲಿಸಿ ಕೂಡಲೇ ಲೈಸೆನ್ಸ್ ಪಡೆಯಬೇಕು. ಇದರಿಂದ ಉದ್ಯಮಿಗಳಿಗೆ ಸಮಯ ಉಳಿತಾಯವಾಗಲಿದೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ಮಹಾನಗರ ಪಾಲಿಕೆ ಎಇಇ ಅಮೋಘ್ ಮಾತನಾಡಿ, ಏಕಬಳಕೆಯ ಪ್ಲಾಸ್ಟಿಕ್ ಎಲ್ಲ ಕಡೆಗಳಲ್ಲಿ ನಿಷೇಧ ಮಾಡಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಸಾರ್ವಜನಿಕರು ಏಕಬಳಕೆ ಪ್ಲಾಸ್ಟಿಕ್ ಬಳಕೆ ಮಾಡಬಾರದು. ನಿಷೇಧಿತ ಪ್ಲಾಸ್ಟಿಕ್ ಬಳಸಿದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಮಾತನಾಡಿ, ಎರಡು ದಿನಗಳ ಕಾಲ ಟ್ರೇಡ್ ಲೈಸೆನ್ಸ್ ಮೇಳ ನಡೆಯುತ್ತಿದ್ದು, ವ್ಯಾಪಾರ ವಹಿವಾಟು ನಡೆಸುವವರು ಲೈಸೆನ್ಸ್ ಪಡೆದುಕೊಳ್ಳಬೇಕು. ಕಳೆದ ಸಾಲಿನಲ್ಲಿ ಸಾವಿರಕ್ಕೂ ಅಧಿಕ ವ್ಯಾಪಾರಸ್ಥರು ಮೇಳದ ಪ್ರಯೋಜನ ಪಡೆದಿದ್ದರು. ಪಾಲಿಕೆ ಸಹಯೋಗದಲ್ಲಿ ನಡೆಯುತ್ತಿರುವ ಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪಾಲಿಕೆ ಅಧಿಕಾರಿಗಳು, ಆರೋಗ್ಯ ನೀರಿಕ್ಷಕರು ಹಾಗೂ ಸಿಬ್ಬಂದಿ ಸ್ಥಳದಲ್ಲಿಯೇ ಅರ್ಜಿದಾರರಿಂದ ದಾಖಲೆಗಳನ್ನು ಪಡೆದುಕೊಂಡು ಪರಿಶೀಲಿಸಿ ಲೈಸೆನ್ಸ್ ನೀಡುವ ಕೆಲಸ ಮಾಡುತ್ತಿದ್ದಾರೆ. ಎರಡು ದಿನ ( ಮಂಗಳವಾರ ಮತ್ತು ಬುಧವಾರ ) ನಡೆಯುವ ಮೇಳದ ಸದುಪಯೋಗ ವ್ಯಾಪಾರಸ್ಥರು ಪಡೆದುಕೊಳ್ಳುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕರಾದ ಗಣೇಶ್ ಅಂಗಡಿ, ಮಂಜೇಗೌಡ, ಜವಳಿ ವರ್ತಕರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್, ಕಾರ್ಯದರ್ಶಿ ಪ್ರಭಾಕರ್, ಪಾಲಿಕೆ ಆರೋಗ್ಯ ನೀರಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!