ರಸ್ತೆ ಸುರಕ್ಷತೆ ಕುರಿತು ಜಾಗೃತಿ, ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿ

ರಸ್ತೆ ಸುರಕ್ಷತೆ ಕುರಿತು ಜಾಗೃತಿ, ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿ

ಶಿವಮೊಗ್ಗ | 10 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಿದಂತೆ ವಾಹನಗಳ ಸಂಖ್ಯೆಯು ಹೆಚ್ಚುತ್ತಿದ್ದು, ವಾಹನಗಳನ್ನು ಸರಿಯಾದ ರೀತಿ ಚಾಲನೆ ಮಾಡದಿರುವುದು ರಸ್ತೆ ಅಪಘಾತಗಳಿಗೆ ಹೆಚ್ಚು ಕಾರಣವಾಗಿದೆ. ಸುರಕ್ಷಿತ ವಾಹನ ಚಾಲನೆಯು ಪ್ರತಿಯೊಬ್ಬರ ಜವಾಬ್ದಾರಿ ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಿವಮೊಗ್ಗ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ವಾಹನ ಚಾಲನೆ ಬಗ್ಗೆ ಜಾಗೃತಿ ಮೂಡಿಸುವ ನಾಮಫಲಕ ಉದ್ಘಾಟಿಸಿ ಮಾತನಾಡಿ, ಸುರಕ್ಷಿತ ವಾಹನ ಚಾಲನೆ ಮಾಡುವುದರಿಂದ ಅಪಘಾತ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ರಸ್ತೆಯಲ್ಲಿ ಬೇಕಾಬಿಟ್ಟಿ ಚಾಲನೆ ಮಾಡುವುದು, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು. ತರಬೇತಿ ಹಾಗೂ ಪರವಾನಿಗೆ ಇಲ್ಲದೆ ಚಾಲನೆ ಮಾಡುವುದು ರಸ್ತೆ ಅಪಘಾತಕ್ಕೆ ಕಾರಣವಾಗಿದೆ. ರೋಟರಿ ಜಿಲ್ಲಾ ಸಂಸ್ಥೆಯು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷಿತ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಸಂಚಾರಿ ಪೊಲೀಸ್ ಸಹಾಯದಿಂದ ಹಾಗೂ ಪ್ರಮುಖ ಸ್ಥಳಗಳಲ್ಲಿ ನಾಮಫಲಕ ಅಳವಡಿಸುವುದರ ಮುಖಾಂತರ ಜಾಗೃತಿ ನಡೆಸಲಾಗುತ್ತಿದೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯವರು ಒಳ್ಳೆಯ ಸ್ಥಳದಲ್ಲಿ ಜಾಗೃತಿ ಮೂಡಿಸುವ ರೇಡಿಯಮ್ ಇರುವ ದೊಡ್ಡ ನಾಮಫಲಕವನ್ನು ಅಳವಡಿಸುತ್ತಿರುವುದು ತುಂಬಾ ಸಂತೋಷವಾಗಿದೆ. ನಾಮಫಲಕವನ್ನು ನೆಪ್ಚೂನ್ ಆಟೋ ವರ್ಕ್ ಸಹಕಾರದಲ್ಲಿ ಅಳವಡಿಸುತ್ತಿರುವುದು ತುಂಬಾ ಸಂತೋಷ. ಸಾರ್ವಜನಿಕರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸಬೇಕು. ಚಾಲನೆ ಮಾಡುವಾಗ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಕಾರ್ ಗಳಲ್ಲಿ ಸೀಟ್ ಬೆಲ್ಟ್ ಗಳನ್ನು ಅಳವಡಿಸಿಕೊಂಡು ಚಾಲನೆ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಸಹಾಯಕ ಗವರ್ನರ್ ರವಿ ಕೊಟೋಜಿ ಮಾತನಾಡಿ, ಈ ವರ್ಷ ರೋಟರಿಯ ಜಿಲ್ಲಾ ಯೋಜನೆಗಳಲ್ಲಿ ಪ್ರಮುಖವಾದ ಒಂದು ಯೋಜನೆ ರಸ್ತೆ ಸುರಕ್ಷತೆ. ಈಗಾಗಲೇ ಎಲ್ಲಾ ರೋಟರಿ ಕ್ಲಬ್ ಗಳಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಮುಂಬರುವ ದಿನಗಳಲ್ಲಿ ರಸ್ತೆ ಸುರಕ್ಷತೆಯ ನಾಮಫಲಕಗಳನ್ನು ಬೇರೆ ಬೇರೆ ಪ್ರಮುಖ ಸ್ಥಳಗಳಲ್ಲಿ ಅಳವಡಿಸಲಾಗುವುದು. ರಸ್ತೆ ಸುರಕ್ಷತೆಯ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಜೋನಲ್ ಲೆಫ್ಟಿನೆಂಟ್ ಧರ್ಮೇಂದ್ರ ಸಿಂಗ್ ಬಂಟಿ ಮಾತನಾಡಿದರು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ ವಿಜಯಕುಮಾರ್, ವಸಂತ ಹೋಬಳಿದಾರ್, ವಲಯ ತರಬೇತುದಾರ ಡಾ. ಗುಡದಪ್ಪ ಕಸಬಿ, ಶ್ರೀಕಾಂತ್ ಮಹೇಶ್, ಕಾರ್ಯದರ್ಶಿ ಕಿಶೋರ್ ಕುಮಾರ್, ನಿರ್ದೇಶಕ ಸಿ ಕೆ ವಿಜಯಕುಮಾರ್, ಸಂತೋಷ್, ಕುಮಾರಸ್ವಾಮಿ, ಮಂಜುನಾಥ್, ದಿವ್ಯ ಪ್ರವೀಣ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!