ಅಲ್ಲಮ ಪ್ರಭು, ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ, ಅಲ್ಲಮ ಪ್ರಭುಗಳ ತತ್ವ ಆದರ್ಶ ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶನ

ಅಲ್ಲಮ ಪ್ರಭು, ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ, ಅಲ್ಲಮ ಪ್ರಭುಗಳ ತತ್ವ ಆದರ್ಶ ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶನ

ಶಿವಮೊಗ್ಗ | 26 ಜನವರಿ 2024 | ಡಿಜಿ ಮಲೆನಾಡು.ಕಾಂ

12ನೇ ಶತಮಾನದ ಶಿವಶರಣ ಅಲ್ಲಮ ಪ್ರಭುಗಳ ತತ್ವ ಆದರ್ಶ, ವಚನ ಸಾಹಿತ್ಯವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೂ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಬೆಕ್ಕಿನ ಕಲ್ಮಠದಲ್ಲಿ ಪರಮ ತಪಸ್ವಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಆಯೋಜಿಸಿದ್ದ ಶರಣ ಸಾಹಿತ್ಯ ಸಮ್ಮೇಳನ, 532ನೇ ಮಾಸಿಕ ಶಿವಾನುಭವಗೋಷ್ಠಿ, ಅಲ್ಲಮ ಪ್ರಭು, ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಬಸವಣ್ಣ, ಅಲ್ಲಮ ಪ್ರಭು, ಅಕ್ಕಮಹಾದೇವಿ ಸೇರಿದಂತೆ ಎಲ್ಲ ಶಿವಶರಣರ ವಚನ ಸಾಹಿತ್ಯದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾನು ಸಹ ನನ್ನ ಜೀವನದಲ್ಲಿ ವಚನ ಸಾಹಿತ್ಯ ಮೌಲ್ಯಗಳನ್ನು ಅನುಷ್ಠಾನ ಮಾಡಲು ಪ್ರಯತ್ನ ನಡೆಸುತ್ತೇನೆ ಎಂದು ತಿಳಿಸಿದರು.

ಧಾರ್ಮಿಕ ಕಾರ್ಯಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇನೆ. ಅಲ್ಲಮಪ್ರಭು ಜನ್ಮ ಸ್ಥಳ ಸೇರಿದಂತೆ ಶಿವಮೊಗ್ಗ ಜಿಲ್ಲೆ ಸಂಬಂಧಿಸಿ ಶಿವಶರಣರ ಕ್ಷೇತ್ರಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಪಡಿಸಲು ಸರ್ಕಾರದ ಹಂತದಲ್ಲಿ ಪ್ರಯತ್ನ ನಡೆಸುತ್ತೇನೆ ಎಂದರು.

ಆಕಾಶವಾಣಿ ನಿವೃತ್ತ ನಿರ್ದೇಶಕ ಡಾ. ಬಸವರಾಜ ಸಾದರ ಮಾತನಾಡಿ, ಶರಣ ಪರಂಪರೆ ಹಾಗೂ ಮಠಗಳು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಜಗತ್ತಿಗೆ ಸಾರಿದವರು ವಿಶ್ವಗುರು ಬಸವಣ್ಣ. ಪ್ರತಿ ವಚನವು ಹೊಸ ಅಲೋಚನೆಗಳಿಗೆ ತೆರೆದುಕೊಳ್ಳುವಂತೆ ಮಾಡುತ್ತದೆ. ಅಲ್ಲಮ ಪ್ರಭು ಗಳ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯ ವಿಶ್ರಾಂತ ಪ್ರಾಧ್ಯಾಪಕಿ ಡಾ. ಶಾಂತಕುಮಾರಿ ಇಮ್ರಾಪುರ ಮಾತನಾಡಿ, ಅಕ್ಕಮಹಾದೇವಿ ಪ್ರಶಸ್ತಿ ಪುರಸ್ಕಾರ ನೀಡಿ ಸನ್ಮಾನಿಸುವ ಕಾರ್ಯ ಆರಂಭವಾಗಿರುವುದು ಶರಣ ಸಾಹಿತ್ಯದ‌‌ ಶ್ರೇಷ್ಠ ಪರಂಪರೆಗೆ ಸಲ್ಲಿಸುವ ಗೌರವ. ಶಿವಮೊಗ್ಗದಲ್ಲಿ ಅಕ್ಕಮಹಾದೇವಿ ಪ್ರಶಸ್ತಿ ಸ್ವೀಕರಿಸಿರುವುದು ನನಗೆ  ಸಂತೋಷದ ಸಂಗತಿ ಎಂದು ತಿಳಿಸಿದರು.

ಬೆಂಗಳೂರು ಆಕಾಶವಾಣಿ ನಿವೃತ್ತ ನಿರ್ದೇಶಕ ಡಾ. ಬಸವರಾಜ ಸಾದರ ಅವರಿಗೆ “ಅಲ್ಲಮ ಪ್ರಭು ಪ್ರಶಸ್ತಿ” ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ವಿಶ್ರಾಂತ ಪ್ರಾಧ್ಯಾಪಕಿ ಡಾ. ಶಾಂತಕುಮಾರಿ ಇಮ್ರಾಪುರ ಅವರಿಗೆ “ಅಕ್ಕಮಹಾದೇವಿ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು. ಕವಿ, ಚಿಂತಕ ಡಾ. ಕುಮಾರ ಚಲ್ಯ ಅಭಿನಂದನಾ ನುಡಿಗಳನ್ನಾಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್, ಯುಎಇ ಬಸವ ಸಮಿತಿ ಸ್ಥಾಪಕ ಚಂದ್ರಶೇಖರ ಲಿಂಗದಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಸಂಗೀತ ಶಿಕ್ಷಕಿ ಸುಮಾ ಹೆಗಡೆ, ಆಕಾಶವಾಣಿ ಕಲಾವಿದೆ ನಾಗರತ್ನಮ್ಮ ಚಂದ್ರಶೇಖರಯ್ಯ ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. 112 ಜನರು ಸಮೂಹ ವಚನ ಗಾಯನ ನಡೆಸಿಕೊಟ್ಟರು. ಶ್ರೀ ವಿಜಯ ಕಲಾನಿಕೇತನ ವೃಂದವು ವಚನ ನೃತ್ಯ ನಡೆಸಿಕೊಟ್ಟಿತು.

ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಮಹಾಸಂಸ್ಥಾನ ಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ ಉಪಸ್ಥಿತರಿದ್ದರು. ಶಾಸಕ‌ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ‌ಡಿ.ಎಸ್.ಅರುಣ್, ಮಾಜಿ ಸದಸ್ಯ ಆಯನೂರು ಮಂಜುನಾಥ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಡಾ. ಆರ್.ಸಿ.ಜಗದೀಶ್, ಡಾ. ವಿಜಯಾದೇವಿ, ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಎಚ್.ಸಿ.ಯೋಗೀಶ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಕೋಶಾಧ್ಯಕ್ಷ ಇ.ವಿಶ್ವಾಸ್, ಹಣಕಾಸು ಸಮಿತಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಪ್ರಚಾರ ಸಮಿತಿ ಅಧ್ಯಕ್ಷ ಸೋಮನಾಥ್.ಕೆ.ಆರ್., ಶೀಲಾ ಸುರೇಶ್, ಸಂತೋಷ್ ಬಳ್ಳೇಕೆರೆ, ರುದ್ರಯ್ಯ ಶಾಸ್ತ್ರಿ, ಶಾಂತಾ ಆನಂದ್ ಮತ್ತಿತರರು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!