ಅಭಿವೃದ್ಧಿ ಕೆಲಸಗಳು ದೀರ್ಘಕಾಲ ಉಳಿಯಲು ಜನರ ಸಹಕಾರ ಅಗತ್ಯ

ಅಭಿವೃದ್ಧಿ ಕೆಲಸಗಳು ದೀರ್ಘಕಾಲ ಉಳಿಯಲು ಜನರ ಸಹಕಾರ ಅಗತ್ಯ

ಶಿವಮೊಗ್ಗ | 7 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ಸ್ಮಾರ್ಟ್ ಸಿಟಿ ಕಾರ್ಯಗಳು ದೀರ್ಘಕಾಲ ಉಳಿಯಲು ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಬರಲು ಸಾರ್ವಜನಿಕರ ಸಹಕಾರ ಮುಖ್ಯ, ಅವರ ಜವಾಬ್ದಾರಿ ಹೆಚ್ಚಿರುತ್ತದೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿಜಯಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕಾಪಾಡಿಕೊಳ್ಳಬೇಕು. ಸ್ಮಾರ್ಟ್ ಸಿಟಿಯಲ್ಲಿ 930 ಕೋಟಿ ರೂ. ಕಾಮಗಾರಿ ನಡೆದಿದ್ದು, ರಿಪೇರಿ ಕಾರ್ಯಕ್ಕೆ ಇನ್ನು 70 ಕೋಟಿ ರೂ. ಹಣವನ್ನು ಮೀಸಲು ಹಣವಾಗಿ ಇಡಲಾಗಿದೆ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿಯ ಎಲ್ಲ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿವಿಧ ಇಲಾಖೆ ಹಾಗೂ ಮಹಾನಗರ ಪಾಲಿಕೆಗೆ ಹಸ್ತಾಂತರಿಸುವುದು ಬಾಕಿ ಉಳಿದಿರುತ್ತದೆ. ಪೂರ್ಣಗೊಂಡ ಕಾಮಗಾರಿಗಳನ್ನು ಹಸ್ತಾಂತರಿಸುವಂತೆ ರಾಜ್ಯ ಸರ್ಕಾರದ ಕಾರ್ಯದರ್ಶಿ ನಿರ್ದೇಶನ ನೀಡಿರುತ್ತಾರೆ ಎಂದರು.

ಸ್ಮಾರ್ಟ್ ಸಿಟಿ ಎಲ್ಲ ಕಾಮಗಾರಿಗಳನ್ನು, ಪತ್ರ ವ್ಯವಹಾರಗಳನ್ನು ಹಸ್ತಾಂತರಿಸಿಕೊಳ್ಳಲು ಕ್ರಮ ವಹಿಸಲಾಗುತ್ತದೆ. ನಿರ್ವಹಣೆ ಮೊತ್ತವನ್ನು ತೆಗೆದುಕೊಂಡು ರಸ್ತೆ ಪಾರ್ಕ್ ಇತ್ಯಾದಿ ನಿರ್ವಹಣೆಯನ್ನು ಪ್ರಾರಂಭಿಸಬೇಕಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ವತಿಯಿಂದ ಸ್ಮಾರ್ಟ್ ಸಿಟಿಯಲ್ಲಿ ಆಗಬೇಕಿರುವ ಬಾಕಿ ಸಣ್ಣಪುಟ್ಟ ಕೆಲಸಗಳು ರಿಪೇರಿ ಕಾರ್ಯಗಳನ್ನು ಬೇಗ ಮಾಡಿ ಮುಗಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ಸ್ಮಾರ್ಟ್ ಸಿಟಿಯಿಂದ ಶಿವಮೊಗ್ಗ ನಗರ ಸಾಕಷ್ಟು ಅಭಿವೃದ್ಧಿ ಹೊಂದುವುದರ ಜತೆಗೆ ತುಂಬಾ ಸುಂದರವಾಗಿ ಕಾಣುತ್ತಿದೆ. ಇನ್ನು ಆಗಬೇಕಿರುವ ಕೆಲಸದ ಕಡೆ ಗಮನ ವಹಿಸಬೇಕು ಎಂದು ಹೇಳಿದರು.

ರೋಟರಿ ಸದಸ್ಯರ ಹಲವಾರು ಪ್ರಶ್ನೆಗಳಿಗೆ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿಜಯ್ ಕುಮಾರ್ ಉತ್ತರಿಸಿದರು. ಸರ್ಕಾರದ ಯೋಜನೆಗಳು ಫಲಪ್ರದವಾಗಲು ಸಾರ್ವಜನಿಕರ ಸಹಕಾರ ಬೇಕು. ಸ್ಮಾರ್ಟ್ ಸಿಟಿಯಿಂದ ಶಿವಮೊಗ್ಗ ಚಿತ್ರಣವೇ ಬದಲಾಗಿದೆ ಎಂದು ನುಡಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ್ ಹೋಬಳಿದಾರ್, ಬಿಂದು ವಿಜಯಕುಮಾರ್, ಮಂಜುನಾಥ್‌ರಾವ್ ಕದಂ, ಚಂದ್ರಹಾಸ್ ಪಿ.ರಾಯ್ಕರ್, ಡಾ. ಅರುಣ್, ಡಾ. ಧನಂಜಯ, ಕೆ.ಜಿ.ರಾಮಚಂದ್ರರಾವ್, ಗಣೇಶ್, ಸಹಾಯಕ ಗವರ್ನರ್ ಎಸ್.ಆರ್.ನಾಗರಾಜ್, ಹೊಸತೋಟ ಸೂರ್ಯನಾರಾಯಣ್, ರವೀಂದ್ರನಾಥ್ ಐತಾಳ್, ಕಿಶೋರ್‌ಕುಮಾರ್, ಡಾ. ಎಚ್.ಎಸ್. ನಾಗಭೂಷಣ್, ಕಾಂತೇಶ್ ಕದರಮಂಡಲಗಿ, ಶ್ರೀನಿವಾಸ್ ಗೌಡ, ಮಂಜುನಾಥ್, ಕೃಷ್ಣಮೂರ್ತಿ, ಗೀತಾ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!