ರೋಟರಿ ವಿಜಯಕುಮಾರ್‌ಗೆ ರಾಜರತ್ನ ಪ್ರಶಸ್ತಿ

ರೋಟರಿ ವಿಜಯಕುಮಾರ್‌ಗೆ ರಾಜರತ್ನ ಪ್ರಶಸ್ತಿ

ಶಿವಮೊಗ್ಗ | 29 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ಕಿಮ್‌ ಸ್ಟಾರ್ ಉಡುಪಿ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಬೆಂಗಳೂರು ಚಿತ್ರೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗದ ರೋಟರಿ ಮಾಜಿ ಸಹಾಯಕ ಗವರ್ನರ್‌ ಜಿ.ವಿಜಯಕುಮಾರ್ ಅವರಿಗೆ “ಡಾ. ಪುನೀತ್ ರಾಜ್‌ಕುಮಾರ್ ರಾಜರತ್ನ ಸೇವಾ ಪ್ರಶಸ್ತಿ” ಪ್ರದಾನ ಮಾಡಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಜಿ.ವಿಜಯಕುಮಾರ್ ಅವರು ದಶಕಗಳಿಂದ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆರ್ಥಿಕ ಸಹಾಯ, ಕುಡಿಯುವ ನೀರಿನ ವ್ಯವಸ್ಥೆ, ಶಿಕ್ಷಣ, ಆರೋಗ್ಯ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸೈಕ್ಲಿಂಗ್‌ನಲ್ಲಿ ಗಿನ್ನೆಸ್ ಲಿಮ್ಕಾ ದಾಖಲೆ ಮಾಡಿದ್ದಾರೆ. 47 ಬಾರಿ ರಕ್ತದಾನ ಮಾಡಿದ್ದಾರೆ.

ರೋಟರಿ ವಿಜಯ್‌ಕುಮಾರ್ ಅವರ ದಶಕಗಳ ಸಾಮಾಜಿಕ ಸೇವೆಯನ್ನು ಗುರುತಿಸಿ ಡಾ. ಪುನೀತ್‌ರಾಜ್ ಕುಮಾರ್ ರಾಜರತ್ನ ಸೇವಾ ಪ್ರಶಸ್ತಿ ನೀಡಲಾಯಿತು. ಪುನೀತ್‌ರಾಜ್ ಪುತ್ಥಳಿ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಜನಪದ ಗಾಯಕ ಗುರುರಾಜ್ ಹೊಸಕೋಟಿ, ಚಲನಚಿತ್ರ ನಿರ್ದೇಶಕ ಲೋಹಿತ್ ರಾಣ, ಚಿತ್ರನಟಿ ರಕ್ಷಾ, ಕಿಮ್‌ಸ್ಟಾರ್ ಉಡುಪಿ ಸಂಸ್ಥೆ ಅಧ್ಯಕ್ಷ ಕೆ.ಜಯಶೀಲನ್, ಉಡುಪಿ ಕುಕ್ಕೇಹಳ್ಳಿಯ ಆದಿಶಕ್ತಿ ಮೂಕಾಂಬಿಕಾ ಶ್ರೀ ಕಾಗಜ್ಜ ದೇವಸ್ಥಾನದ ಧರ್ಮದರ್ಶಿ ಡಾ. ಕೃಷ್ಣ ಕುಲಾಲ್, ವಿದುಷಿ ಉಮಾ ದಿಲೀಪ್, ವಿದ್ಯಾ ಮಂಜುನಾಥ್, ಬಿಂದು ವಿಜಯಕುಮಾರ್ ಇತರರು ಉಪಸ್ಥಿತರಿದ್ದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ವಿಜಯಕುಮಾರ್ ಅವರಿಗೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಪದಾಧಿಕಾರಿಗಳು, ಶಿವಗಂಗಾ ಯೋಗಕೇಂದ್ರ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ, ಎಸ್.ಎಸ್.ಜ್ಯೋತಿಪ್ರಕಾಶ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!