ಉನ್ನತ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ

ಶಿವಮೊಗ್ಗ | 31 ಡಿಸೆಂಬರ್ 2024 | ಡಿಜಿ ಮಲೆನಾಡು.ಕಾಂ
ಬದುಕಿನ ಉನ್ನತಿಗೆ ಲಭ್ಯವಾಗುವ ಎಲ್ಲ ಉನ್ನತ ಅವಕಾಶಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಸೋಮವಾರ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಚೇರಿ ಸಭಾಂಗಣದಲ್ಲಿ ಎನ್ಇಎಸ್ ಎಜುಕೇಷನ್ ಅಸಿಸ್ಟೆಂಟ್ ಟ್ರಸ್ಟ್ ವತಿಯಿಂದ ವಿವಿಧ ವಿದ್ಯಾಸಂಸ್ಥೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಕಲಿಕೆ ಸಂದರ್ಭದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದೆಂಬ ಕಾಳಜಿಯಿಂದ ಎಜುಕೇಷನ್ ಅಸಿಸ್ಟೆಂಟ್ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಗೆ ದಾಖಲಾತಿ ವೇಳೆಯಲ್ಲಿ ಪೋಷಕರಿಗಿರುವ ಆರ್ಥಿಕ ಅನಾನುಕೂಲತೆ ಅರಿತು ಪ್ರಾಚಾರ್ಯರೊಂದಿಗೆ ಚರ್ಚಿಸಿ ಅಗತ್ಯ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಉತ್ತಮ ಅಧ್ಯಯನ, ಫಲಿತಾಂಶ ಮತ್ತು ಸಾಧನೆಗೆ ಪೂರಕ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇದರ ಲಾಭಾಂಶ ಪಡೆದ ವಿದ್ಯಾರ್ಥಿಗಳು, ಉನ್ನತ ಸ್ಥಾನ ತಲುಪಿದ ನಂತರ ಭವಿಷ್ಯದಲ್ಲಿ ತಮ್ಮಂತಹ ಇತರೆ ವಿದ್ಯಾರ್ಥಿಗಳಿಗೂ ಸಹಾಯ ಮಾಡುವಂತಹ ಸಮಾಜಮುಖಿ ಕಾಳಜಿ ಬೆಳೆಸಿಕೊಳ್ಳಬೇಕು ಎಂದರು.
ಎನ್ಇಎಸ್ ಎಜುಕೇಷನ್ ಅಸಿಸ್ಟೆಂಟ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಒಂಬತ್ತು ವರ್ಷಗಳಿಂದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲ ಆಗುವಂತೆ, ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. 447 ವಿದ್ಯಾರ್ಥಿಗಳಿಗೆ 26 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮತ್ತಷ್ಟು ಹೆಚ್ಚಿಸುವ ಆಶಯ ನಮ್ಮದಾಗಿದೆ ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಎಚ್.ಸಿ.ಶಿವಕುಮಾರ್, ಮೈಲಾರಪ್ಪ, ಅನಂತದತ್ತಾ, ಆಜೀವ ಸದಸ್ಯರಾದ ರಾಮಪ್ರಸಾದ್, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಲೆಕ್ಕಪತ್ರ ವಿಭಾಗದ ಸಂಜಯ್, ಮುಖ್ಯ ಶಿಕ್ಷಕ ಇಮ್ತಿಯಾಜ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/