ಪುನೀತ್‌ ರಾಜ್‌ಕುಮಾರ್‌ಗೆ ನವೆಂಬರ್‌ 1ರಂದು ಕರ್ನಾಟಕ ರತ್ನ ಪ್ರದಾನ

ಪುನೀತ್‌ ರಾಜ್‌ಕುಮಾರ್‌ಗೆ ನವೆಂಬರ್‌ 1ರಂದು ಕರ್ನಾಟಕ ರತ್ನ ಪ್ರದಾನ

ಬೆಂಗಳೂರು | 21 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ನಟ ಪುನೀತ್‌ ರಾಜ್‌ಕುಮಾರ್‌ಗೆ ಘೋಷಿಸಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್‌ 1ರ ಕನ್ನಡ ರಾಜ್ಯೋತ್ಸವ ದಿನ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಪುನೀತ್‌ ರಾಜ್‌ಕುಮಾರ್‌ ಸ್ಮರಣಾರ್ಥ ಸಭೆಯಲ್ಲಿ ತೀರ್ಮಾನಿಸಿದಂತೆ, ನವೆಂಬರ್‌ 1ರಂದು ಸಂಜೆ 4ಕ್ಕೆ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈವರೆಗೂ 8 ಜನರಿಗೆ ಪ್ರಶಸ್ತಿ ನೀಡಲಾಗಿದೆ. 2009ರ ನಂತರ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜೀವನದ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಿ ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿರುವ ಪುನೀತ್‌ ರಾಜ್‌ಕುಮಾರ್‌ ನಿಜವಾದ ಕರ್ನಾಟಕ ರತ್ನ. ಸದಾ ಕಾಲ ಯುವಜನರಿಗೆ ಪ್ರೇರಣೆ ನೀಡುತ್ತಿದ್ದ ಸಾಧಕರು ಪುನೀತ್‌ ರಾಜ್‌ಕುಮಾರ್‌. ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ನವೆಂಬರ್‌ 1ರ ಕಾರ್ಯಕ್ರಮದಲ್ಲಿ ಡಾ. ರಾಜ್‌ಕುಮಾರ್‌ ಕುಟುಂಬ ಸದಸ್ಯರು, ಚಲನಚಿತ್ರ ನಟರು, ಸಾಹಿತಿಗಳು, ಸಚಿವರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

digimalenadu

ಶಿವಮೊಗ್ಗ

Related articles

error: Content is protected !!