ಭಾರತೀಯ ತೀರ್ಥಕ್ಷೇತ್ರಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ
ಶಿವಮೊಗ್ಗ | 12 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಪಠ್ಯಗಳಲ್ಲಿ ಭಾರತೀಯ ತೀರ್ಥಕ್ಷೇತ್ರಗಳ ಬಗ್ಗೆ ಪರಿಚಯಿಸುವ ಹಾಗೂ ಮಕ್ಕಳಿಗೆ ತೀರ್ಥ ಕ್ಷೇತ್ರಗಳ ಬಗ್ಗೆ ಅರಿವು ಮೂಡಿಸುವ ಪಠ್ಯಗಳನ್ನು ಅಳವಡಿಸುವ ಕೆಲಸ ಆಗಬೇಕು ಎಂದು ವಾಗ್ಮಿ ಆದರ್ಶ ಗೋಖಲೆ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಲೇಖಕಿ ಡಾ. ಮೈತ್ರೇಯಿ ಆದಿತ್ಯ ಪ್ರಸಾದ್ ಅವರ “ಶ್ರೀ ವಾದಿರಾಜರ ತೀರ್ಥಪ್ರಬಂಧ” ಸಂಶೋಧನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಾದಿರಾಜರ ತೀರ್ಥಪ್ರಬಂಧ ಸಂಶೋಧನಾ ಕೃತಿಯು ನಾಡಿನ ಆಧ್ಯಾತ್ಮ ಪರಂಪರೆಯನ್ನು ತಿಳಿಸುವ ಗ್ರಂಥವಾಗಿದೆ. ಶ್ರೇಷ್ಠ ಗ್ರಂಥಗಳ ಸಾಲಿನಲ್ಲಿ ಸ್ಥಾನ ಪಡೆಯಲಿದ್ದು, ಆಧ್ಯಾತ್ಮ ಭಾರತದ ದರ್ಶನ ಸಿಗಲಿದೆ. ಪ್ರತಿಯೊಂದು ಮನೆಗಳಲ್ಲಿಯೂ ಇಂತಹ ಕೃತಿ ಇರುವ ಜತೆಯಲ್ಲಿ ಮಕ್ಕಳಿಗೆ ಓದಿಸಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಶಿವಮೊಗ್ಗ ಶ್ರೀ ಅಚ್ಯುತ ಯೋಗ ವಿದ್ಯಾಪೀಠದ ಬೆಣ್ಣೆ ಭಾಸ್ಕರ ರಾವ್, ಪೇಸ್ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕಿ, ಲೇಖಕಿ ಡಾ. ಮೈತ್ರೇಯಿ ಆದಿತ್ಯ ಪ್ರಸಾದ್, ಸಿದ್ದಾರ್ಥ್, ಆದಿತ್ಯಪ್ರಸಾದ್, ಗಣೇಶ್ ವೈದ್ಯ, ಶಬರೀಶ್ ಕಣ್ಣನ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

