ರಾಬರ್ಟ್ ನಾಯಕಿಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸನ್ಮಾನ, ಆಶಾ ಭಟ್ ಸಂತಸದ ಮಾತು

ಶಿವಮೊಗ್ಗ | 26 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಸರ್ಜಿ ಫೌಂಡೇಶನ್ ವತಿಯಿಂದ ನಟಿ, ರಾಬರ್ಟ್ ಸಿನಿಮಾದ ನಾಯಕಿ ಆಶಾಭಟ್ ಅವರನ್ನು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ “ನೀವು ನಮ್ಮ ಹೆಮ್ಮೆ” ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸನ್ಮಾನ ಸ್ವೀಕರಿಸಿ ಆಶಾಭಟ್ ಮಾತನಾಡಿ, ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ತುಂಬಾ ಸಂತಸ ಕೊಟ್ಟಿದೆ. ಇದು ನನ್ನ ಸೌಭಾಗ್ಯಕೂಡ. ಕಲೆ ಮತ್ತು ಕಲಾವಿದರು ಬೆಳೆಯಬೇಕು, ಉಳಿಯಬೇಕು ಎಂದರೆ ಕಲಾವಿದರನ್ನು ಪ್ರೋತ್ಸಾಹಿಸುವಂತಹ ಕೆಲಸಗಳಾಬೇಕು.ಈ ನಿಟ್ಟಿನಲ್ಲಿ ಡಾ. ಧನಂಜಯ ಸರ್ಜಿ ಅವರು ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಇಂತಹ ಸನ್ಮಾನಗಳು ಸಾಧಕರಿಗೆ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ ಎಂದು ತಿಳಿಸಿದರು.
ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಧನಂಜಯ ಸರ್ಜಿ ಮಾತನಾಡಿ, ಸಾಧನೆಗೆ ಕುಟುಂಬದವರ ಪ್ರೋತ್ಸಾಹ ಹಾಗೂ ಉತ್ತಮ ವಾತಾವರಣವೂ ಪ್ರಮುಖವಾಗುತ್ತದೆ. ಹೆತ್ತವರ ಬೆಂಬಲ ಮತ್ತು ಸತತ ಪ್ರಯತ್ನದ ಫಲವಾಗಿ ನಟಿ ಆಶಾಭಟ್ ಸಿನಿಮಾ ರಂಗದಲ್ಲಿ ಬಹು ಎತ್ತರಕ್ಕೆ ಬೆಳೆದಿದ್ದಾರೆ ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ದೊಡ್ಡ ಕನಸನ್ನು ಇಟ್ಟುಕೊಂಡು ಗುರಿ ಬೆನ್ನತ್ತಿದಾಗ ಜೀವನವೂ ಹಾಗೆಯೇ ರೂಪುಗೊಳ್ಳುತ್ತದೆ. ಹಲವಾರು ಭಾಷೆ ಹಾಗೂ ಹಲವು ಕಲೆಗಳನ್ನು ಕರಗತ ಮಾಡಿಕೊಂಡು ನಿರಂತರ ಶ್ರಮದೊಂದಿಗೆ ಒಳ್ಳೆಯ ಕಲಾವಿದೆಯಾಗಿ ಆಶಾಭಟ್ ಹೆಸರು ಮಾಡಿದ್ದಾರೆ. ಇನ್ನಷ್ಟು ದೊಡ್ಡಮಟ್ಟದಲ್ಲಿ ಬೆಳೆಯಲಿ ಎಂದು ಆಶಿಸಿದರು.
ಹುಟ್ಟು ಮತ್ತು ಸಾವಿನ ಮಧ್ಯೆ ಜೀವನವನ್ನು ಹೇಗೆ ರೂಪಿಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಇಂದಿಗೂ ಕನ್ನಡನಾಡು ನಟ ಪುನೀತ್ ರಾಜ್ಕುಮಾರ್ ಅವರನ್ನು ನಿತ್ಯವೂ ಸ್ಮರಣೆ ಮಾಡುತ್ತಿದೆ. ನಟನೆಯೊಂದಿಗೆ ದಾನ, ಧರ್ಮ , ಮಾನವೀಯ ಹಾಗೂ ಸಮಾಜಮುಖಿ ಕಾರ್ಯಗಳು ಅದಕ್ಕೆ ಕಾರಣ ಎಂದರು.
ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕಿ ನಮಿತಾ ಸರ್ಜಿ, ಶಾಮಲಾ ಭಟ್, ಸಿಹಿಮೊಗೆಯ ಸಾಲು ದೀಪಗಳು ಪುಸ್ತಕದ ಲೇಖಕಿ ದೀಪಾ ಕುಬಸದ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu