ಕೆ.ಎಸ್‌.ಈಶ್ವರಪ್ಪ ಜನ್ಮದಿನ ಪ್ರಯುಕ್ತ ಶಿವಮೊಗ್ಗ ನಾಗರೀಕ ಅಭಿನಂದನಾ ಸಮಿತಿ, ಶ್ರೀಗಂಧ ಸಂಸ್ಥೆಯಿಂದ ಅಮೃತ ಸಂಭ್ರಮ ಕಾರ್ಯಕ್ರಮ ಜೂನ್‌ 10ಕ್ಕೆ

ಕೆ.ಎಸ್‌.ಈಶ್ವರಪ್ಪ ಜನ್ಮದಿನ ಪ್ರಯುಕ್ತ ಶಿವಮೊಗ್ಗ ನಾಗರೀಕ ಅಭಿನಂದನಾ ಸಮಿತಿ, ಶ್ರೀಗಂಧ ಸಂಸ್ಥೆಯಿಂದ ಅಮೃತ ಸಂಭ್ರಮ ಕಾರ್ಯಕ್ರಮ ಜೂನ್‌ 10ಕ್ಕೆ

ಶಿವಮೊಗ್ಗ | 7 ಜೂನ್ 2023 | ಡಿಜಿ ಮಲೆನಾಡು.ಕಾಂ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ 75ನೇ ಜನ್ಮ ದಿನ ಪ್ರಯುಕ್ತ ಶಿವಮೊಗ್ಗ ನಾಗರೀಕ ಅಭಿನಂದನಾ ಸಮಿತಿ, ಶ್ರೀಗಂಧ ಸಂಸ್ಥೆಯಿಂದ ಜೂನ್‌ 10ರ ಸಂಜೆ 5.30ಕ್ಕೆ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ “ಅಮೃತ ಸಂಭ್ರಮ” ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎಸ್‌.ಎನ್‌.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕೆ.ಎಸ್‌.ಈಶ್ವರಪ್ಪ ಜನ್ಮದಿನ ಆಯೋಜಿಸಿರುವ ಅಭಿನಂದನಾ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯ ವಹಿಸುವರು. ಹೆಸರಾಂತ ಗಾಯಕ ಶಂಕರ ಶಾನಭಾಗ್‌ ತಂಡದಿಂದ ಸಾತ್ವಿಕ ಶೀರ್ಷಿಕೆಯಡಿ ಶ್ರೇಷ್ಠ ದಾಸ ಪರಂಪರೆಯ ಮಹೋನ್ನತ ಕೃತಿಗಳ ಕೀರ್ತನೆಗಳನ್ನು ಪ್ರಸ್ತುತಪಡಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೂನ್‌ 10ರ ಬೆಳಗ್ಗೆ 8ಕ್ಕೆ ಶುಭಮಂಗಳ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು, ನಂತರ ಬೆಳಗ್ಗೆ 10ಕ್ಕೆ ಕುವೆಂಪು ರಂಗಮಂದಿರದಲ್ಲಿ ಮಾರಿಕಾಂಬ ಫೈನಾನ್ಸ್‌ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಪಾಲಿಕೆ ಸದಸ್ಯ ಇ.ವಿಶ್ವಾಸ್‌ ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶ್ರೀಗಂಧ ಸಂಸ್ಥೆ ಕಾರ್ಯದರ್ಶಿ ಬಿ.ಆರ್.ಮಧುಸೂದನ್‌, ಕೆ.ಸಿ.ನಟರಾಜ ಭಾಗವತ್‌, ವೆಂಕಟೇಶರಾವ್‌, ವಿದ್ವಾನ್‌ ಎಚ್.ಎಸ್.ನಾಗರಾಜ್‌, ಮಾಜಿ ಮೇಯರ್‌ ಏಳುಮಲೈ, ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಪ್ರಭಾಕರ್‌ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!