ಮಲ್ನಾಡ್ ಕಣ್ಣಿನ ಆಸ್ಪತ್ರೆ ಶುಭಾರಂಭ, ಶಿವಮೊಗ್ಗದಲ್ಲಿ ಪ್ರಸಾದ್ ನೇತ್ರಾಲಯದ ಅಂಗ ಸಂಸ್ಥೆ

ಮಲ್ನಾಡ್ ಕಣ್ಣಿನ ಆಸ್ಪತ್ರೆ ಶುಭಾರಂಭ, ಶಿವಮೊಗ್ಗದಲ್ಲಿ ಪ್ರಸಾದ್ ನೇತ್ರಾಲಯದ ಅಂಗ ಸಂಸ್ಥೆ

ಶಿವಮೊಗ್ಗ | 8 ಜೂನ್ 2023 | ಡಿಜಿ ಮಲೆನಾಡು.ಕಾಂ

ಪ್ರಸಾದ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಶಿವಮೊಗ್ಗ ನಗರದ ರೋಟರಿ ಬ್ಲಡ್‌ ಬ್ಯಾಂಕ್‌ ರಸ್ತೆಯಲ್ಲಿ ಆರಂಭಗೊಂಡಿರುವ “ಮಲ್ನಾಡ್‌ ಕಣ್ಣಿನ ಆಸ್ಪತ್ರೆ”ಯನ್ನು ಜೋತಿಷ್ಯ ವಿದ್ವಾನ್‌  ಕಬಿಯಾಡಿ ಜಯರಾಮ್‌ ಆಚಾರ್ಯ ಉದ್ಘಾಟಿಸಿದರು. ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ ಪಾಲ್ಗೊಂಡಿದ್ದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಪ್ರಸಾದ್‌ ನೇತ್ರಾಲಯವು ರಾಜ್ಯದಲ್ಲಿ ಎರಡು ದಶಕಗಳಿಂದ ನೇತ್ರ ಚಿಕಿತ್ಸೆ ಸೇವೆ ಒದಗಿಸುತ್ತಿದ್ದು, ದೇಶ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಉಚಿತ ತಪಾಸಣಾ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿದೆ. ಇದೀಗ ಶಿವಮೊಗ್ಗ ನಗರದಲ್ಲಿ ಸುಸಜ್ಜಿತ, ಆಧುನಿಕ ತಂತ್ರಜ್ಞಾನ ವ್ಯವಸ್ಥೆಯುಳ್ಳ ಮಲ್ನಾಡ್‌ ಕಣ್ಣಿನ ಆಸ್ಪತ್ರೆ ಶುಭಾರಂಭಗೊಂಡಿದೆ.

ಮಲ್ನಾಡ್‌ ಕಣ್ಣಿನ ಆಸ್ಪತ್ರೆಯು ಶಿವಮೊಗ್ಗ ಜಿಲ್ಲೆ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳ ಜನರಿಗೆ ಉತ್ತಮ ನೇತ್ರ ಚಿಕಿತ್ಸೆ ಸೇವೆ ಒದಗಿಸಲಿದೆ. ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ಹೊಂದಿರುವ ಉಪಕರಣಗಳನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಮಲ್ನಾಡ್‌ ಕಣ್ಣಿನ ಆಸ್ಪತ್ರೆಯ ನೂತನ ತಂಡಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಶುಭಕೋರಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಸಾದ್‌ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್‌ ಕೂಡ್ಲು, ವಿದ್ವಾನ್‌ ಕಬಿಯಾಡಿ ಜಯರಾಮ ಆಚಾರ್ಯ, ಎಂಎಲ್‌ಸಿ ಎಸ್‌.ರುದ್ರೇಗೌಡ, ಪ್ರಸಾದ್‌ ನೇತ್ರಾಲಯ ನಿರ್ದೇಶಕ ಡಾ. ಬಾಲಚಂದ್ರ ತೆಗ್ಗಿಹಳ್ಳಿ, ಸಮೂಹ ಕಣ್ಣಿನ ಆಸ್ಪತ್ರೆ ಆಡಳಿತ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್‌, ಮಕ್ಕಳ ತಜ್ಞೆ ಡಾ. ಅಪರ್ಣಾ ಜೆ., ಪ್ರಮುಖರಾದ ಎಸ್‌.ಪಿ.ದಿನೇಶ್‌, ಜ್ಯೋತಿಪ್ರಕಾಶ್‌, ಎನ್‌.ಜೆ.ರಾಜಶೇಖರ್‌, ಕೆ.ರಘುರಾಮರಾವ್‌, ನಿವೃತ್ತ ಪ್ರಾಚಾರ್ಯ ಜಯಪ್ಪ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!