ಡಿವಿಎಸ್ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ನಡ ನಡಿಗೆ ಬೃಹತ್ ಜಾಥಾ

ಡಿವಿಎಸ್ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ನಡ ನಡಿಗೆ ಬೃಹತ್ ಜಾಥಾ

ಶಿವಮೊಗ್ಗ | 8 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ದೇಶಿಯ ವಿದ್ಯಾಶಾಲಾ ಸಮಿತಿಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಕನ್ನಡ ನಡಿಗೆ ಬೃಹತ್ ಜಾಥಾಕ್ಕೆ ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಚಾಲನೆ ನೀಡಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕನ್ನಡ ರಾಜ್ಯೋತ್ಸವ ವಿಶೇಷ ಆಚರಣೆ ಪ್ರಯುಕ್ತ ದೇಶಿಯ ವಿದ್ಯಾಶಾಲಾ ಸಮಿತಿಯು ಬುಧವಾರ ಸಂಜೆ ಆಯೋಜಿಸಿದ್ದ ಕನ್ನಡ ನಡಿಗೆ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಕನ್ನಡ ಘೋಷಣೆಗಳನ್ನು ಕೂಗಿದರು.

Click on below this picture, Like & Follow Facebook Page ” Digi Malenadu “

ಡಿವಿಎಸ್ ಸಂಸ್ಥೆಯ ವಿದ್ಯಾರ್ಥಿನಿ ವೃತ್ತಿ ವಿ ಜೈನ್ ಅವರು ಜಾಥಾದಲ್ಲಿ ಭಾಗವಹಿಸಿದ್ದರು. ಇತ್ತೀಚೆಗೆ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ ಮಹಿಳಾ ವಿಭಾಗದ ಪಂದ್ಯಾವಳಿಯಲ್ಲಿ ಕಂಚಿನ ಪದಕ ವಿಜೇತರಾಗಿದ್ದರು.
ಡಿವಿಎಸ್ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕನ್ನಡ ನಾಡಿನ ಬರಹಗಾರರ ವೇಷಭೂಷಣಗಳನ್ನು ಧರಿಸಿ ಜಾಥಾದಲ್ಲಿ ಪಾಲ್ಗೊಂಡಿದ್ದರು. ಕನ್ನಡ ಲೇಖಕರ ಹಾಗೂ ಸಾಧಕರ ಭಾವಚಿತ್ರಗಳ ಫಲಕಗಳನ್ನು ವಿದ್ಯಾರ್ಥಿಗಳು ಜಾಥಾದಲ್ಲಿ ಪ್ರದರ್ಶಿಸಿದರು.

ಯುವ ವಿದ್ಯಾರ್ಥಿಗಳೇ ಕನ್ನಡ ಸಂಸ್ಕೃತಿ ಪರಂಪರೆಯ ರಾಯಭಾರಿಗಳು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಕನ್ನಡ ರಾಜ್ಯೋತ್ಸವ ವಿಶೇಷ ಆಚರಣೆ ಪ್ರಯುಕ್ತ ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ 50, ಕನ್ನಡ ನಾಡಿಗೆ ಕನ್ನಡ ನಡಿಗೆ ಬೃಹತ್ ಜಾಥಾ”ದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಹೆಚ್ಚು ಬಳಸಬೇಕು. ಕನ್ನಡ ಭಾಷೆಯ ಶ್ರೇಷ್ಠ ಪರಂಪರೆಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

“ಕರ್ನಾಟಕ ಸಂಭ್ರಮ 50, ಕನ್ನಡ ನಾಡಿಗೆ ಕನ್ನಡ ನಡಿಗೆ ಬೃಹತ್ ಜಾಥಾ”ವು ಡಿವಿಎಸ್ ಸಂಸ್ಥೆ ಆವರಣದಿಂದ ಆರಂಭಗೊಂಡು ಹರ್ಷ ಶೋರೂಂ ಎದುರು ತಲುಪಿ ಬಿಎಚ್ ರಸ್ತೆ ಮಾರ್ಗವಾಗಿ ಶಿವಪ್ಪನಾಯಕ ವೃತ್ತ, ಎಎ ವೃತ್ತ, ನಂತರ ಮಾಲ್ ಮುಂಭಾಗದಿಂದ ನೆಹರು ರಸ್ತೆ, ಟಿ.ಸೀನಪ್ಪ ಶೆಟ್ಟಿ ವೃತ್ತ, ಮಹಾವೀರ ವೃತ್ತ ಪುನಃ ಜಾಥಾವು ಡಿವಿಎಸ್ ಸಂಸ್ಥೆ ಆವರಣ ತಲುಪಿತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕನ್ನಡ ನಡಿಗೆ ಬೃಹತ್ ಜಾಥಾ ನಂತರ ಕರ್ನಾಟಕ ನಕ್ಷೆಯ ಅಲಂಕಾರ ಮಾಡಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಖಜಾಂಚಿ ಬಿ.ಗೋಪಿನಾಥ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಜಿ.ಎಸ್.ಹರೀಶ್, ಎಲ್ಲ ನಿರ್ದೇಶಕರು, ಪದಾಧಿಕಾರಿಗಳು, ಡಿವಿಎಸ್ ಸಂಸ್ಥೆಯ ವಿವಿಧ ಶಾಲಾ ಕಾಲೇಜಿನ ಪ್ರಾಚಾರ್ಯರು, ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮತ್ತಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!