ಅನುಮತಿ ಇಲ್ಲದೇ ಕೆರೆ ಹೂಳು ತೆಗೆದರೆ ಕಾನೂನು ಕ್ರಮ

ಅನುಮತಿ ಇಲ್ಲದೇ ಕೆರೆ ಹೂಳು ತೆಗೆದರೆ ಕಾನೂನು ಕ್ರಮ

ಶಿವಮೊಗ್ಗ | 19 ಮೇ 2024 | ಡಿಜಿ ಮಲೆನಾಡು.ಕಾಂ

ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೂಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೇ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಕಾಮಗಾರಿಗಳಿಗೆ,  ಕೆರೆ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ನೀರಾವರಿ ಇಲಾಖೆ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ,  ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು ಎಂದರು.

ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳು ಅರ್ಜಿಯನ್ನು ಪರಿಶೀಲಿಸಿ, ಕೆರೆ ಪ್ರದೇಶದಲ್ಲಿ ಎತ್ತುವಳಿ ಮಾಡಬಹುದಾದ ಹೂಳು, ಮಣ್ಣಿನ ಅಂದಾಜು ಪಟ್ಟಿ ತಯಾರಿಸಬೇಕು.  ಕೆರೆಯ ಯಾವ ಭಾಗದಲ್ಲಿ ಹೂಳು, ಮಣ್ಣನ್ನು ಎತ್ತುವಳಿ ಮಾಡಬಹುದು ಎಂಬ ನಕಾಶೆ ಉಳ್ಳ ವಿಸ್ತೃತ ಯೋಜನಾ ವರದಿಯೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರವಾನಿಸುತ್ತವೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿಯ ಪ್ರಾಧಿಕಾರ ಉಳ್ಳ ಕೆರೆಗಳಲ್ಲಿ ಹೂಳು, ಮಣ್ಣು ತೆಗೆಯಲು ಅನುಮತಿ ಕೋರಿದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯ ಅನುಮೋದನೆ ಹಾಗೂ ಸಕ್ಷಮ ಪ್ರಾಧಿಕಾರಿಗಳಿಂದ ಡಿ.ಪಿ.ಆರ್.‌ ತಯಾರಿಸಿ ಪ್ರಸ್ತಾವನೆಯನ್ನು ಗಣಿ, ಭೂ ವಿಜ್ಞಾನ ಇಲಾಖೆಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಸೂಕ್ತ ತೀರುವಳಿಗಳು ಹಾಗೂ ದಾಖಲಾತಿಗಳೊಂದಿಗೆ ಸ್ವೀಕೃತಗೊಂಡ ಪ್ರಸ್ತಾವನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರಿಶೀಲಿಸಿ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994, ತಿದ್ದುಪಡಿ ನಿಯಮಗಳು 2023 ರಂತೆ ಸರ್ಕಾರಕ್ಕೆ ಪಾವತಿಸಬೇಕಾದ ರಾಜಧನ ಮತ್ತು ಇನ್ನಿತರೆ ಶುಲ್ಕಗಳನ್ನು ನಿಗಧಿಪಡಿಸಿ ಕಾರ್ಯಾದೇಶ ನೀಡಬೇಕು. ಕಾರ್ಯಾದೇಶವನ್ನು ಐ.ಎಲ್.ಎಂ.ಎಸ್.‌ ತಂತ್ರಾಂಶದಲ್ಲಿ ನೋಂದಣಿ ಮಾಡಿ ಮಣ್ಣು ಸಾಗಾಣಿಕೆ ಮಾಡಲು ಖನಿಜ ಸಾಗಾಣಿಕೆ ಪರವಾನಿಗೆ ವಿತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಹೂಳು ಮತ್ತು ಮಣ್ಣು ತೆಗೆಯಲು  ಈ  ವಿಧಾನವನ್ನು ಕ್ರಮಬದ್ಧವಾಗಿ ಪಾಲನೆ ಮಾಡಬೇಕು. ನಿಯಮಾನುಸಾರ ಕಾರ್ಯಾದೇಶ ಪಡೆಯದೇ ಜಿಲ್ಲಾದ್ಯಂತ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ಅಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ನಿಯಮಾನುಸಾರ ಹಾಗೂ ಕ್ರಮಬದ್ಧವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಕಾರ್ಯಾನುಮತಿ ಪಡೆದು ಕೆರೆಗಳಲ್ಲಿ ಹೂಳು, ಮಣ್ಣು ಎತ್ತುವಳಿ ಕೈಗೊಳ್ಳಬೇಕು. ತಪ್ಪಿದಲ್ಲಿ ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ಹಾಗೂ ಸಾಗಾಣಿಕೆಯಲ್ಲಿ ತೊಡಗಿರುವ ವಾಹನಗಳನ್ನು ಜಪ್ತಿ ಮಾಡಿ ದಂಡ ಸಹಿತವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೆರೆ ಪ್ರಾಧಿಕಾರಗಳಿಗೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಕಾರ್ಯಪ್ಪ, ಹಿರಿಯ ಭೂ ವಿಜ್ಞಾನಿ ನವೀನ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!