ಮಕ್ಕಳ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ ಪೋಷಕರ ನಡೆ ನುಡಿ

ಮಕ್ಕಳ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ ಪೋಷಕರ ನಡೆ ನುಡಿ

ಶಿವಮೊಗ್ಗ | 22 ಜುಲೈ 2024 | ಡಿಜಿ ಮಲೆನಾಡು.ಕಾಂ

ಪೋಷಕರು ನಡೆದುಕೊಳ್ಳುವ ರೀತಿ ಹಾಗೂ ಜೀವನಶೈಲಿಯು ಮಕ್ಕಳ ವ್ಯಕ್ತಿತ್ವ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತವೆ ಎಂದು ಮಾನಸ ನರ್ಸಿಂಗ್ ಹೋಂ ಹಿರಿಯ ಸಲಹೆಗಾರ್ತಿ ಡಾ. ವಿದ್ಯಾ ರಘುದತ್ ಜವಳಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ಪೋಷಕರ ಪ್ರಭಾವ ಕುರಿತು ಮಾತನಾಡಿ, ಮಕ್ಕಳು ಭ್ರೂಣಾವಸ್ಥೆಯಲ್ಲಿ ಇರುವಾಗಲೇ ಹೊರಗಿನ ಪ್ರಪಂಚ ಹಾಗೂ ತಾಯಿಯ ಮಾನಸಿಕ ಸ್ಥಿತಿಗೆ ಅನುಗುಣವಾಗಿ ಬೆಳೆದು ನಂತರ ಮೂರನೇ ಒಂದು ಭಾಗದಷ್ಟು ಅನುವಂಶೀಯ ನಡೆ ನಡಾವಳಿ ಹಾಗೂ ಮೂರನೇ ಒಂದು ಭಾಗದಷ್ಟು ಪೋಷಕರ ನಡೆ ನುಡಿಗಳು ಹಾಗೂ ಮಕ್ಕಳ ಅಂದಿನ ಒಡನಾಟ ಮತ್ತು ಸಂಬಂಧಗಳ ಬಗ್ಗೆ ಪೂರಕವಾಗಿ ವಿಕಸಿತ ಹೊಂದುತ್ತವೆ ಎಂದು ತಿಳಿಸಿದರು.

ಸುತ್ತಮುತ್ತಲ ಪರಿಸರ, ಜ್ಞಾನ, ಗೆಳೆಯರು ಹಾಗೂ ನೆರೆಯವರಿಯವರಿಂದ ಇನ್ನುಳಿದ ಮೂರನೇ ಒಂದು ಭಾಗದಷ್ಟು ವಿಕಸಿತ ಮನಸ್ಥಿತಿ ಹೊಂದುತ್ತಾರೆ. ಜೀವನದ ವಿವಿಧ ಸ್ತರಗಳಲ್ಲಿ ವಿವಿಧ ರೀತಿಯ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಂಪೂರ್ಣ ಮಾನಸಿಕ ಹಾಗೂ ದೈಹಿಕ ಅಭಿವೃದ್ಧಿ ಸಾಧ್ಯ ಎಂದರು.

ಉತ್ತಮ ಪರಿಸರ ಮಕ್ಕಳ ಉತ್ತಮ ಮನಸ್ಥಿತಿಗೆ ಪೂರಕವಾಗಿ ಕೆಲಸ ಮಾಡುತ್ತದೆ. ಉತ್ತಮ ನಡವಳಿಕೆಗೆ ದಾರಿ ಮಾಡಿಕೊಡುತ್ತದೆ. ಕಾಲಕ್ಕೆ ತಕ್ಕಂತೆ ಬದಲಾದ ತಂತ್ರಜ್ಞಾನಗಳು ಮಕ್ಕಳ ದಿನಚರಿ ಬದಲಿಸಿ ಪೋಷಕರೊಂದಿಗೆ ಒಡನಾಟಗಳು ಕಡಿಮೆಯಾಗಿ ಮಾನಸಿಕ ಅಸ್ವಸ್ಥತೆ ಉಂಟಾಗುತ್ತಿದ್ದು, ಅವರನ್ನು ಉತ್ತಮ ದಾರಿಗೆ ತರಲು ಪೋಷಕರ ಜವಾಬ್ದಾರಿ ಹೆಚ್ಚು ಎಂದು ಹೇಳಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಇತ್ತೀಚಿನ ದಿನಗಳಲ್ಲಿ ಅತಿಯಾದ ಮುದ್ದಿನಿಂದ ಮಕ್ಕಳು ನಿಜವಾದ ಜೀವನದ ಕಷ್ಟ ಸುಖಗಳನ್ನ ತಿಳಿದುಕೊಳ್ಳುವುದರಲ್ಲಿ ಹಿಂದೆ ಬಿದ್ದಿದ್ದಾರೆ. ಪೋಷಕರು ಮಕ್ಕಳಿಗೆ ಸ್ವತಂತ್ರ ಜೀವನ ನಡೆಸುವುದನ್ನು ಕಲಿಸಲು ವಿಫಲರಾಗಿದ್ದಾರೆ. ಕಷ್ಟದ ಪರಿಸ್ಥಿತಿಯನ್ನು ಎದುರಿಸುವ ಮಾನಸಿಕತೆಯನ್ನು ಬೆಳೆಸುವಲ್ಲಿ ವಿಫಲರಾಗಿ ಮಕ್ಕಳಲ್ಲಿ ಖಿನ್ನತೆ ಆತ್ಮಹತ್ಯೆಯಂತಹ ಮಾನಸಿಕತೆಗಳು ಹೆಚ್ಚುತ್ತಿರುವುದು ಇದಕ್ಕೆ ನಿದರ್ಶನ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಕಿಶೋರ್ ಕುಮಾರ್, ವಸಂತ ಹೋಬಳಿದಾರ್, ಮಂಜುನಾಥ ರಾವ್ ಕದಂ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!