ಕೌಶಲ್ಯಗಳ ಕಲಿಕೆಯಿಂದ ಉದ್ಯಮದಲ್ಲಿ ಯಶಸ್ಸು
ಶಿವಮೊಗ್ಗ | 19 ಜನವರಿ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ಜೀವನದಲ್ಲಿ ಕೌಶಲ್ಯಗಳ ಕಲಿಕೆಗೆ ಆದ್ಯತೆ ನೀಡುವುದರಿಂದ ಉದ್ಯಮದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ ಎಂದು ಜೆಸಿಐ ತರಬೇತುದಾರರಾದ ನಿವೇದಿತಾ ವಿಕಾಸ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಮಾರುಕಟ್ಟೆಯಲ್ಲಿ ಅತ್ಯಂತ ಪೈಪೋಟಿ ಇದ್ದು, ಉದ್ಯಮದಲ್ಲಿ ಯಶಸ್ವಿಯಾಗಲು ಕೌಶಲ್ಯಗಳು ಅತ್ಯಂತ ಮುಖ್ಯ. ಪರಿಣಾಮಕಾರಿಯಾಗಿ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಉದ್ಯಮಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಪ್ರತಿಯೊಬ್ಬ ವ್ಯಕ್ತಿ ಯಾವುದೇ ವೃತ್ತಿಯಲ್ಲಿ ಸೇವೆ ಸಲ್ಲಿಸುವುದಕ್ಕಿಂತ ಮುಂಚೆ ತನ್ನ ಕೌಶಲ್ಯ ತಿಳಿದುಕೊಂಡು ತನ್ನ ವೃತ್ತಿಯನ್ನು ಪ್ರಾರಂಭಿಸಬೇಕು. ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಪೂರಕವಾಗಿ ಮಾಹಿತಿಗಳನ್ನು ಅಧ್ಯಯನ ನಡೆಸಬೇಕು ಎಂದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ಕುಮಾರ್ ಮಾತನಾಡಿ, ರೋಟರಿ ಕ್ಲಬ್ ವತಿಯಿಂದ ಯುವಜನರಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಹಾಗೂ ಉದ್ಯಮ ನಡೆಸಲು ಪೂರಕವಾಗಿ ಅನುಕೂಲವಾಗುವಂತೆ ಮಾರ್ಗದರ್ಶನಕ್ಕಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಮಾತನಾಡಿ, ಯಾವುದೇ ವೃತ್ತಿ ಪ್ರಾರಂಭ ಮಾಡುವುದಕ್ಕಿಂತ ಮುಂಚೆ ಎಸ್ ಡಬ್ಲ್ಯೂ ಒ ಟಿ ವಿಶ್ಲೇಷಣೆ ಅರ್ಥ ಮಾಡಿಕೊಂಡು ವ್ಯವಹಾರ ನಡೆಸಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಶ್ರೀಕಾಂತ್, ಮಹೇಶ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಪರಮೇಶ್ವರ್ ಶಿಗ್ಗಾವ್, ಚಂದ್ರಹಾಸ ಪಿ.ರಾಯ್ಕರ್, ಬಿ.ಗಂಗಪ್ಪ, ಶ್ರೀನಿವಾಸ್ ಗೌಡ, ಮಾಜಿ ಅಧ್ಯಕ್ಷ ಅರುಣ್ ದೀಕ್ಷಿತ್, ರೋಟರಿ ಸದಸ್ಯರು ಹಾಜರಿದ್ದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
